ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
Cross references
ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.
ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.
ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.
ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.
ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.
ಏಳನೇ ತಿಂಗಳಾದ ಏತಾನೀಮ್ ಎಂಬ ತಿಂಗಳಲ್ಲಿ ಹಬ್ಬವಿದ್ದಾಗ ಇಸ್ರಾ ಯೇಲಿನ ಸಮಸ್ತ ಮನುಷ್ಯರು ಅರಸನಾದ ಸೊಲೊ ಮೋನನ ಬಳಿಗೆ ಕೂಡಿಬಂದರು.
ಏಳನೇ ತಿಂಗಳು ಬಂದ ತರುವಾಯ ಇಸ್ರಾಯೇಲ್ ಮಕ್ಕಳು ಪಟ್ಟಣಗಳಲ್ಲಿ ಇರುವಾಗ ಜನರು ಒಬ್ಬ ಮನುಷ್ಯನೇ ಎಂಬಂತೆ ಯೆರೂಸಲೇಮಿನಲ್ಲಿ ಕೂಡಿಕೊಂಡರು.
ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?
ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.