ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
Cross references
ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ
ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು.
ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು.
ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.
ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ಪಾಪಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;