ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
Cross references
ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.
ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
ಇದಲ್ಲದೆ ನೀವು ಯಾವತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾ ಗಲಿ, ಪ್ರಾಣಿಯದಾಗಲಿ, ನಿಮ್ಮ ಯಾವ ನಿವಾಸಗಳ ಲ್ಲಿಯೂ ತಿನ್ನಬಾರದು.
ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.
ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.
ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ.
ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.
ಆಗ ಅವರು ಸೌಲನಿಗೆ--ಇಗೋ, ಜನರು ಮಾಂಸದ ಕೂಡ ರಕ್ತವನ್ನು ತಿನ್ನುವದರಿಂದ ಕರ್ತನಿಗೆ ವಿರೋಧವಾಗಿ ಪಾಪ ಮಾಡುತ್ತಾರೆಂದು ತಿಳಿಸಿದರು. ಅದಕ್ಕವನು--ನೀವು ದ್ರೋಹ ಮಾಡಿ ದಿರಿ; ಈಗ ಒಂದು ದೊಡ್ಡಕಲ್ಲನ್ನು ನನ್ನ ಬಳಿಗೆ ಹೊರ ಳಿಸಿ ಬಿಡಿರಿ ಅಂದನು.
ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.
ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ?
ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;
ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.