ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
Cross references
ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.
ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು.
ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
ಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು.
ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ.
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು