ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.
Cross references
ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.
ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯನ್ನು ತೆಗೆದುಕೊಂಡು ಅವಳ ಬೆತ್ತಲೆ ತನವನ್ನು ನೋಡಿದರೆ ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ; ಅವರು ತಮ್ಮ ಜನರ ದೃಷ್ಟಿಯಲ್ಲಿಯೇ ತೆಗೆದು ಹಾಕಲ್ಪಡಬೇಕು; ಅವರ ರಕ್ತವು ಅವರ ಮೇಲೆ ಇರುವದು. ಅವನು ತನ್ನ ಸಹೋದರಿಯ ಬೆತ್ತಲೆತನ ವನ್ನು ಕಾಣುವಂತೆ ಮಾಡಿದ್ದರಿಂದ ತನ್ನ ಅಪರಾಧ ವನ್ನು ತಾನೇ ಹೊತ್ತುಕೊಳ್ಳುವನು.
ಇದಲ್ಲದೆ ನೀನು ನಿನ್ನ ತಾಯಿಯ ಸಹೋದರಿಯ ಇಲ್ಲವೆ ತಂದೆಯ ಸಹೋದರಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು, ಕಾಣುವಂತೆ ಮಾಡಿದವನು ತನ್ನ ಹತ್ತಿರದ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡಿದ್ದಾನೆ; ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು.
ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.
ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.