ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು.
Cross references
ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.
ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.
ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ.
ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.
ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.
ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.
ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು.
ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.
ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.
ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.