Cross references
ಕದಿಯಬಾರದು.
ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.
ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ ಸಾಮಾನುಗಳನ್ನಾಗಲಿ ಇಟ್ಟುಕೊಳ್ಳುವದಕ್ಕೆ ಕೊಟ್ಟಾಗ ಅದು ಅವನ ಮನೆಯಿಂದ ಕಳ್ಳತನವಾಗಿ ಆ ಕಳ್ಳನು ಸಿಕ್ಕಿದರೆ ಅವನು ಎರಡರಷ್ಟು ಕೊಡಬೇಕು.
ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶು ವನ್ನಾದರೂ ಕಾಯುವದಕ್ಕೆ ಕೊಟ್ಟಾಗ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ನೋಡದೆ ಇದ್ದಾಗ ಓಡಿಸಿಕೊಂಡು ಹೋದರೆ
ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ
ಕದಿಯಬೇಡ.
ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.
ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.
ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ.
ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.