ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
Cross references
ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ಸಾಮಾನುಗಳನ್ನು ಅವನು ಮುಟ್ಟಲಿಲ್ಲ ವೆಂದು ವಿಚಾರಿಸುವದಕ್ಕೆ ನ್ಯಾಯಾಧಿಪತಿಗಳ ಬಳಿಗೆ ಅವನನ್ನು ಬರಮಾಡಬೇಕು.
ಅದು (ಕಾಡು ಮೃಗದಿಂದ) ಕೊಲ್ಲಲ್ಪಟ್ಟಿದ್ದರೆ ಅದನ್ನು ಸಾಕ್ಷಿಗಾಗಿ ತರಲಿ, ಕೊಲ್ಲಲ್ಪಟ್ಟದ್ದಕ್ಕೆ ಬದಲು ಕೊಡಬಾರದು.
ಆದರೆ ಯಜಮಾನನು ಅದರ ಸಂಗಡ ಇದ್ದರೆ ಬದಲು ಕೊಡದೆ ಇರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಬಂದಿರುವದು.
ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು.
ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು.
ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು.
ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
ಸೇವಕನು ನೆರಳನ್ನು ಅಪೇಕ್ಷಿಸುವ ಪ್ರಕಾರವೂ ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾ ರವೂ
ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು.
ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.