ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
Cross references
ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು?
ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.
ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.
ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ.
ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.
ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.