ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
Cross references
ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ;
ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.
ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.
ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.
ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.
ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.