ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
Cross references
ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.
ಅವನು--ನೋಡಿರಿ, ಕರ್ತನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ. ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ, ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು.
ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.
ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
ತಂದೆ ತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಸಾಯಬೇಕು.
ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು.
ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.
ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು.
ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ
ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ
ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;
ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.
ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--
ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು.
ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?