ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
Cross references
ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.
ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.
ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
ಹೀಗೆ ನೀವು ಇಸ್ರಾಯೇಲ್ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ.
ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು.
ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ
ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.
ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.
ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?