ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
Cross references
ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.
ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
ಆದದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವದಕ್ಕೆ ಅರಸ ನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು ಅವಳಿಗೆ ಅಡ್ಡಬಿದ್ದು ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಅರಸನ ತಾಯಿಗೋಸ್ಕರ ಆಸನವನ್ನು ಹಾಕಿಸಿದನು.
ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು;
ಆಗ ಬೂಜ್ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು.
ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ.
ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ
ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.