ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು.
Cross references
ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.
ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.
ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.
ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ.
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು.
ಇದಲ್ಲದೆ ಬಾಳ್ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.
ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.