ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
Cross references
ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್ನಿಗೂ ಈತಾಮಾರ್ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.
ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.
ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
ಅವರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆ ತಾಯಿ, ಮಗ, ಮಗಳು, ಸಹೋದರ, ಮತ್ತು ಗಂಡ ಇಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು.
ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
ಈಗ ಓ ಯಾಜಕರೇ, ಈ ಆಜ್ಞೆ ನಿಮಗಾಗಿ ಅದೆ.
ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ.