ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು.
Cross references
ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು.
ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ.
ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.