ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
Cross references
ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.
ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು.
ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು.
ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ
ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.
ಇಸ್ರಾಯೇಲ್ಮಕ್ಕಳ ಸಂಗಡ ಮಾತನಾಡಿ ಅವರಿಗೆನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ
ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವ ರಿಗೆ--ನಾನು ನಿಮ್ಮನ್ನು ತರುವ ದೇಶಕ್ಕೆ ಬಂದು
ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.
ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.
ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.
ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟ ವಾದದ್ದೂ ನೀವು ನನಗೆ ಪ್ರತ್ಯೇ ಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕ ನದ್ದಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ಮೊದಲನೇ ಹಿಟ್ಟನ್ನು ನೀವು ಯಾಜಕ ರಿಗೆ ಕೊಡ ತಕ್ಕದ್ದು.ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.
ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.