ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
Cross references
ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು.
ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.
ಐದುನೂರು ಶೆಕೆಲ್ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು,
ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು.
ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು.
ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ.
ನೀನು ನೀರನ್ನು ಸಹ ಅಳತೆಯ ಪ್ರಕಾರ ಕುಡಿಯಬೇಕು. ಹಿನ್ನಿನ ಆರನೆಯ ಪಾಲನ್ನು ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.
ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು.ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.
ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಏಫದ ಆರನೇ ಪಾಲನ್ನು ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಎಣ್ಣೆಯ ಹಿನ್ನಿನಲ್ಲಿ ಮೂರನೇ ಪಾಲನ್ನು ಸಿದ್ಧಮಾಡಬೇಕು. ಇದು ಕರ್ತನಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದೆ ಆಹಾರದ ಅರ್ಪಣೆಯಾಗಿದೆ.
ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?