ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು.
Cross references
ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ.
ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು.
ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು.
ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:
ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.