ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
Cross references
ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು.
ಅವನು--ನೋಡಿರಿ, ಕರ್ತನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ. ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ, ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು.
ಹೀಗೆ ಜನರು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.
ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.
ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.
ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.
ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.
ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.
ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ
ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.