ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
Cross references
ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
ಸಂಭ್ರಮದ ಈ ವರುಷದಲ್ಲಿ ಪ್ರತಿಯೊಬ್ಬನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.
ಅವನಿಗೆ ಅದನ್ನು ಬಿಡಿಸಿಕೊಳ್ಳುವದಕ್ಕೆ ಯಾರಾದರೂ ಇಲ್ಲದೆ ತಾನೇ ಅದನ್ನು ಬಿಡಿಸಿಕೊಳ್ಳುವ ಸ್ಥಿತಿ ಉಂಟಾದರೆ
ಲೇವಿಯರಿಂದ ಏನಾದರೂ ಕೊಂಡುಕೊಂಡರೆ ಕೊಂಡುಕೊಂಡ ಮನೆಯೂ ಅವನ ಸ್ವಾಸ್ತ್ಯದ ಪಟ್ಟಣವೂ ಸಂಭ್ರಮದ ವರುಷದಲ್ಲಿ ಬಿಡುಗಡೆಯಾಗ ಬೇಕು; ಲೇವಿಯರ ಪಟ್ಟಣಗಳ ಮನೆಗಳು ಇಸ್ರಾ ಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಾಗಿವೆ.
ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು.
ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.
ತನ್ನ ಸ್ವಾಸ್ತ್ಯದ ಹೊಲಗಳಲ್ಲಿ ಸೇರದಂಥ, ತಾನು ಕೊಂಡುಕೊಂಡ ಹೊಲವನ್ನು ಒಬ್ಬನು ಕರ್ತನಿಗೆ ಪರಿಶುದ್ಧ ಮಾಡಿದರೆ
ಇಸ್ರಾಯೇಲ್ ಮಕ್ಕಳ ಮುಖ್ಯ ಯಜಮಾನರಾಗಿರುವ ಪ್ರಧಾನರ ಮುಂದೆ ಯೂ ಮಾತನಾಡಿ--ಇಸ್ರಾಯೇಲ್ ಮಕ್ಕಳಿಗೆ ಚೀಟಿ ನಿಂದ ಸ್ವಾಸ್ತ್ಯಕ್ಕಾಗಿ ದೇಶವನ್ನು ಕೊಡುವದಕ್ಕೆ ಕರ್ತನು ನಮ್ಮ ಒಡೆಯನಿಗೆ ಆಜ್ಞಾಪಿಸಿದನು; ನಮ್ಮ ಸಹೋದರ ನಾದ ಚಲ್ಪಹಾದನ ಸ್ವಾಸ್ತ್ಯವನ್ನು ಅವನ ಕುಮಾರ್ತೆ ಯರಿಗೆ ಕೊಡುವದಕ್ಕೆ ನಮ್ಮ ಒಡೆಯನು ಕರ್ತನಿಂದ ಆಜ್ಞೆ ಹೊಂದಿದನು.
ಇಸ್ರಾಯೇಲ್ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು.
ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).
ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.
ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ.
ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.
ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು.
ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.