ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು.
Cross references
ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ.
ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು.
ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ಓ ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ.
ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ?
ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ.
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ