ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು--ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ ದೇಶವು ಕರ್ತನಿ ಗಾಗಿ ಸಬ್ಬತ್ತನ್ನು ಕೈಕೊಳ್ಳಬೇಕು.
Cross references
ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು.
ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ
ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.
ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು.
ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.
ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು,
ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--