ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
Cross references
ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು.
ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.
ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು.
ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ
ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,
ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
ಆದರೆ ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಆ ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ಆ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು.ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು.
ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ
ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?
ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.