ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ
Cross references
ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.
ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?
ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ.
ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.
ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.