ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.
Cross references
ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.
ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.
ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು.
ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
ಈಜುವವನು ಈಜುವದಕ್ಕೆ ತನ್ನ ಕೈಗಳನ್ನು ಹರಡಿಕೊಂಡ ಹಾಗೆ, ಆತನು ಅದರ ಮಧ್ಯೆ ತನ್ನ ಕೈಗಳನ್ನು ಚಾಚುವನು. ಅದರ ಗರ್ವವನ್ನು ಅವರ ಕೊಳ್ಳೆಯೊಂದಿಗೆ ತಗ್ಗಿಸಿ ಬಿಡುವನು.ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
ನೀನು ಯಾಕೆ ಗಾಬರಿಪಡುವ ಮನುಷ್ಯನ ಹಾಗೆಯೂ ರಕ್ಷಿಸಲಾರದ ಪರಾಕ್ರಮಶಾಲಿಯ ಹಾಗೆಯೂ ಇರಬೇಕು? ಆದರೂ ನೀನು, ಓ ಕರ್ತನೇ, ನಮ್ಮ ಮಧ್ಯದಲ್ಲಿ ಇದ್ದೀ, ನಿನ್ನ ಹೆಸರಿನಿಂದ ನಾವು ಕರೆಯಲ್ಪಟ್ಟಿದ್ದೇವೆ; ನಮ್ಮನ್ನು ಕೈ ಬಿಡಬೇಡ.
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು.
ಕರ್ತನು ಹೀಗೆ ಹೇಳುತ್ತಾನೆ--ಐಗುಪ್ತಕ್ಕೆ ಆಧಾರ ವಾದವರು ಬೀಳುವರು. ಅದರ ಶಕ್ತಿಯ ಮದವು ಇಳಿದು ಹೋಗುವದು. ಅಲ್ಲಿನ ಜನರು ಮಿಗ್ದೋಲಿ ನಿಂದ ಸೆವೇನೆಯ ಗೋಪುರ ಮೊದಲುಗೊಂಡು ಅವರಲ್ಲಿ ಕತ್ತಿಯಿಂದ ಹತರಾಗುವರು ಎಂದು ದೇವ ರಾದ ಕರ್ತನು ಹೇಳುತ್ತಾನೆ.
ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ