ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
Cross references
ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.
ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.
ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.
ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.
ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ--
ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.