ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
Cross references
ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.
ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು.
ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.
ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.
ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು.
ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.
ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;
ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.
ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
ಇಸ್ರಾಯೇ ಲಿನ ಪರ್ವತಗಳೇ, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಪರ್ವತಗಳಿಗೂ ಗುಡ್ಡ ಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳು ತ್ತಾನೆ--ಇಗೋ, ನಾನು, ನಾನೇ ನಿಮ್ಮ ಮೇಲೆ ಕತ್ತಿ ಯನ್ನು ತಂದು ನಿಮ್ಮ ಎತ್ತರ ಸ್ಥಳಗಳನ್ನು (ಮೇಡುಗ ಳನ್ನು) ನಾಶಮಾಡುತ್ತೇನೆ.
ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
ನಾನು ನಿಮ್ಮನ್ನು ಕೋಲಿನ ಕೆಳಗೆ ಹಾದುಹೋಗುವಂತೆ ಮಾಡಿ ಒಡಂಬ ಡಿಕೆಯ ಬಂಧನದಲ್ಲಿ ನಿಮ್ಮನ್ನು ಸೇರಿಸುತ್ತೇನೆ.
ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.
ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,
ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.
ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು.
ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.