ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.
Cross references
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.
ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು.
ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ.
ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.
ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.
ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.
ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.
ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ.
ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಆ ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ಅವರ ಹೃದಯವು ಕುಂದುವ ಹಾಗೆಯೂ ಅವರ ಎಲ್ಲಾ ಬಾಗಿಲುಗಳಲ್ಲಿ ಬೀಳೋಣವು ಹೆಚ್ಚಾಗುವ ಹಾಗೆಯೂ ಕತ್ತಿಯ ಮೊನೆಯನ್ನಿಟ್ಟಿದ್ದೇನೆ; ಹಾ, ಅದು ಥಳಥಳಿಸುತ್ತಿದೆ, ಕೊಲೆ ಮಾಡುವದಕ್ಕೆ ಮಸಿಯಲ್ಪಟ್ಟಿದೆ.
ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.
ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.