ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
Cross references
ಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು.
ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ;
ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ.
ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು?
ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.
ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ.
ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ.
ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.
ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.
ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.