ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
Cross references
ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
ಹೀಗೆ ನೀವು ನನ್ನ ನಿಯಮ ನಿರ್ಣಯಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ಆಗ ನೀವು ದೇಶದಲ್ಲಿ ಸುರಕ್ಷಿತರಾಗಿ ವಾಸಿಸುವಿರಿ.
ಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
ನಿನ್ನ ಪಶುಗಳಿಗೆ ಹುಲ್ಲನ್ನು ನಿನ್ನ ಹೊಲದಲ್ಲಿ ಕೊಡುವೆನು; ನೀನು ತಿಂದು ತೃಪ್ತಿಯಾಗುವಿ.
ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ.
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ.
ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ.
ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ.
ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.
ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.