ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.
Cross references
ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.
ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು.
ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
ಕಾನಾನ್ ದೇಶವನ್ನು ಅಂದರೆ ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬ ಡಿಕೆಯನ್ನು ದೃಢಪಡಿಸಿದೆನು.
ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.
ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.
ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು.
ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;
ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
ಆಗ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.