ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
Cross references
ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.
ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.
ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೇಳ ಬೇಕಾದದ್ದೇನಂದರೆ--ನೀವು ಎತ್ತು ಕುರಿ ಆಡು ಇವು ಗಳ ಕೊಬ್ಬನ್ನು ತಿನ್ನಬಾರದು.
ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು.
ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು.
ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.
ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
ಇದಲ್ಲದೆ ದಹನಬಲಿ ಗಳೂ ಸಮಾಧಾನದ ಬಲಿಗಳ ಕೊಬ್ಬೂ ದಹನ ಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳ ವಾಗಿದ್ದವು. ಹೀಗೆಯೇ ಕರ್ತನ ಆಲಯದ ಸೇವೆಯು ಸಿದ್ಧವಾಯಿತು.ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.
ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.