ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು.
Cross references
ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.
ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
ಅವನು ಪ್ರತಿಷ್ಠೆಯ ಟಗರಾದ ಮತ್ತೊಂದು ಟಗರನ್ನು ತಂದನು; ಆರೋನನೂ ಅವನ ಕುಮಾ ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
ಇಸ್ರಾಯೇಲಿನ ಮನೆತನದಲ್ಲಿ ಯಾವನಾದರೂ ಒಂದು ಎತ್ತನ್ನಾಗಲಿ ಕುರಿಮರಿಯ ನ್ನಾಗಲಿ ಆಡನ್ನಾಗಲಿ ಪಾಳೆಯದೊಳಗಾಗಲಿ ಹೊರ ಗಾಗಲಿ ವಧಿಸಿ
ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.
ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.
ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.