Home Bibles ಲೇವ್ಯಕಾಂಡ 4:26 · ಕನ್ನಡ ಬೈಬಲ್
ಲೇವ್ಯಕಾಂಡ 4:26 · ಕನ್ನಡ ಬೈಬಲ್

ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

Cross references

ಲೇವ್ಯಕಾಂಡ 3:5

ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.

ಲೇವ್ಯಕಾಂಡ 4:8

ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ

ಲೇವ್ಯಕಾಂಡ 4:20

ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 4:31

ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 4:35

ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 5:10

ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 5:13

ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.

ಲೇವ್ಯಕಾಂಡ 5:16

ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 5:18

ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.

ಲೇವ್ಯಕಾಂಡ 6:7

ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.

ಲೇವ್ಯಕಾಂಡ 6:20

ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು.

ಲೇವ್ಯಕಾಂಡ 14:18

ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.

ಲೇವ್ಯಕಾಂಡ 15:15

ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.

ಲೇವ್ಯಕಾಂಡ 17:11

ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.

ಲೇವ್ಯಕಾಂಡ 19:22

ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.

ಅಂಕೆಗಳ ಪುಸ್ತಕ 15:25

ಯಾಜಕನು ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.

ಅಂಕೆಗಳ ಪುಸ್ತಕ 15:28

ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.

ಯೆಹೆಜ್ಕೇಲ 43:22

ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.

Interlinear

Choose Theme