Home Bibles ಲೇವ್ಯಕಾಂಡ 4:30 · ಕನ್ನಡ ಬೈಬಲ್
ಲೇವ್ಯಕಾಂಡ 4:30 · ಕನ್ನಡ ಬೈಬಲ್

ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.

Cross references

ನಿರ್ಗಮಕಾಂಡ 29:12

ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.

ಲೇವ್ಯಕಾಂಡ 4:7

ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.

ಲೇವ್ಯಕಾಂಡ 4:25

ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.

ಲೇವ್ಯಕಾಂಡ 4:34

ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 5:9

ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.

ಲೇವ್ಯಕಾಂಡ 8:15

ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.

ಲೇವ್ಯಕಾಂಡ 9:9

ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.

ಯೆಶಾಯ 42:21

ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.

ರೋಮಾಪುರದವರಿಗೆ 8:3

ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.

ರೋಮಾಪುರದವರಿಗೆ 10:4

ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.

ಹೆಬ್ರಿಯರಿಗೆ 2:10

ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.

Interlinear

Choose Theme