ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
Cross references
ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.
ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.
ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.