ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Cross references
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು.
ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಅವನು ಅದರ ಎಲ್ಲಾ ಕೊಬ್ಬನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.
ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.
ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.
ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.
ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;