Home Bibles ಲೇವ್ಯಕಾಂಡ 4:35 · ಕನ್ನಡ ಬೈಬಲ್
ಲೇವ್ಯಕಾಂಡ 4:35 · ಕನ್ನಡ ಬೈಬಲ್

ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

Cross references

ಲೇವ್ಯಕಾಂಡ 1:1

ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

ಲೇವ್ಯಕಾಂಡ 4:20

ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 4:26

ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 4:30

ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.

ಲೇವ್ಯಕಾಂಡ 5:6

ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.

ಲೇವ್ಯಕಾಂಡ 5:10

ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 5:13

ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.

ಲೇವ್ಯಕಾಂಡ 6:7

ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.

ಲೇವ್ಯಕಾಂಡ 9:7

ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.

ಲೇವ್ಯಕಾಂಡ 12:8

ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.

ಲೇವ್ಯಕಾಂಡ 14:18

ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.

ಲೇವ್ಯಕಾಂಡ 14:53

ಆದರೆ ಸಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲ ಗಳಲ್ಲಿ ಹೋಗಬಿಡಬೇಕು; ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು; ಆಗ ಅದು ಶುದ್ಧ ವಾಗಿರುವದು.

ಲೇವ್ಯಕಾಂಡ 15:15

ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.

ಲೇವ್ಯಕಾಂಡ 16:1

ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು.

ಲೇವ್ಯಕಾಂಡ 19:22

ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.

ಅಂಕೆಗಳ ಪುಸ್ತಕ 15:25

ಯಾಜಕನು ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.

ರೋಮಾಪುರದವರಿಗೆ 3:24

ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.

ರೋಮಾಪುರದವರಿಗೆ 4:25

ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.

ರೋಮಾಪುರದವರಿಗೆ 5:6

ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.

ರೋಮಾಪುರದವರಿಗೆ 5:15

ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.

ರೋಮಾಪುರದವರಿಗೆ 8:1

ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.

ರೋಮಾಪುರದವರಿಗೆ 8:3

ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.

ರೋಮಾಪುರದವರಿಗೆ 10:4

ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.

2 ಕೊರಿಂಥದವರಿಗೆ 5:21

ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

ಎಫೆಸದವರಿಗೆ 1:6

ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.

ಎಫೆಸದವರಿಗೆ 5:2

ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ಕೊಲೊಸ್ಸೆಯವರಿಗೆ 1:14

ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.

ಹೆಬ್ರಿಯರಿಗೆ 1:3

ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.

ಹೆಬ್ರಿಯರಿಗೆ 4:14

ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.

ಹೆಬ್ರಿಯರಿಗೆ 7:26

ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.

ಹೆಬ್ರಿಯರಿಗೆ 9:14

ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.

1 ಪೇತ್ರ 1:18

ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;

1 ಪೇತ್ರ 2:22

ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.

1 ಪೇತ್ರ 2:24

ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

1 ಪೇತ್ರ 3:18

ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.

1 ಯೋಹಾನ 1:7

ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.

1 ಯೋಹಾನ 2:2

ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.

1 ಯೋಹಾನ 4:9

ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.

ಪ್ರಕಟನೆ 1:5

ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು

Interlinear

Choose Theme