ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Cross references
ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.
ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.
ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
ಆದರೆ ಸಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲ ಗಳಲ್ಲಿ ಹೋಗಬಿಡಬೇಕು; ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು; ಆಗ ಅದು ಶುದ್ಧ ವಾಗಿರುವದು.
ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.
ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು.
ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.
ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು