ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
Cross references
ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು.
ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು.
ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.
ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.
ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು.
ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.
ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.
ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
ಯಾಜಕ ನಾದ ಎಲ್ಲಾಜಾರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಏಳುಸಾರಿ ಸಭೆಯ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು.
ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ ಆದದ್ದೇನಂದರೆ, ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡ ಏಳು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಮುಂದೆ ನಡೆದರು. ಕರ್ತನ ಒಡಂಬಡಿಕೆಯ ಮಂಜೂ ಷವು ಅವರನ್ನು ಹಿಂಬಾಲಿಸಿತು.