ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Cross references
ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.
ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.
ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.
ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು.
ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.
ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು.
ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.
ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.
ಆದರೆ ಅದು ಅಶುದ್ಧ ಪಶುವಾಗಿದ್ದರೆ ನೀನು ಕ್ರಯ ಕಟ್ಟಿದ ಪ್ರಕಾರ ಅದಕ್ಕೆ ಹೆಚ್ಚಾಗಿ ಐದನೇ ಪಾಲನ್ನು ಕೊಟ್ಟು ಅವನು ಅದನ್ನು ವಿಮೋಚಿಸಬೇಕು; ವಿಮೋಚಿಸದಿದ್ದರೆ ಅದನ್ನು ನೀನು ಕ್ರಯ ಕಟ್ಟಿದ ಪ್ರಕಾರ ಮಾರಬೇಕು.
ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು.
ಆಗ ಅವರು ಮಾಡಿದ ಪಾಪವನ್ನು ಅರಿಕೆಮಾಡಿ ಅವರ ಅಪರಾಧದ ಬದಲು ಕೊಟ್ಟು ಅದರ ಸಂಗಡ ಐದನೇ ಪಾಲನ್ನು ಕೂಡಿಸಿ ಯಾರಿಗೆ ಅಪರಾಧ ಮಾಡಿ ದರೋ ಅವರಿಗೆ ಕೊಡಬೇಕು.
ಅದಕ್ಕವ ರು--ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.
ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.