ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.
Cross references
ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು.
ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ
ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.
ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು.
ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ.
ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
ಅವರು ಒಳ ಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿ ಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.
ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.
ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.