ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
Cross references
ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.
ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.
ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.
ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.
ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು.
ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.
ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.
ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪರಿಶುದ್ಧ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯ ನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾ ದರೂ ಎಣ್ಣೆಯನ್ನಾದರೂ ಯಾವ ವಿಧದ ಆಹಾರವ ನ್ನಾದರೂ ಮುಟ್ಟಿದರೆ ಅದು ಪರಿಶುದ್ಧವಾಗುವದೋ ಕೇಳು ಅಂದನು. ಯಾಜಕರು--ಇಲ್ಲವೆಂದು ಉತ್ತರ ಕೊಟ್ಟರು.
ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.