ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ
Cross references
ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.
ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ ಸಾಮಾನುಗಳನ್ನಾಗಲಿ ಇಟ್ಟುಕೊಳ್ಳುವದಕ್ಕೆ ಕೊಟ್ಟಾಗ ಅದು ಅವನ ಮನೆಯಿಂದ ಕಳ್ಳತನವಾಗಿ ಆ ಕಳ್ಳನು ಸಿಕ್ಕಿದರೆ ಅವನು ಎರಡರಷ್ಟು ಕೊಡಬೇಕು.
ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.
ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಆ ಮನುಷ್ಯನು ಅಪರಾಧಿಯಾಗಿದ್ದಾನೆ;
ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.
ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.
ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ.
ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ
ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ?
ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.