Home Bibles ಲೇವ್ಯಕಾಂಡ 6:7 · ಕನ್ನಡ ಬೈಬಲ್
ಲೇವ್ಯಕಾಂಡ 6:7 · ಕನ್ನಡ ಬೈಬಲ್

ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.

Cross references

ನಿರ್ಗಮಕಾಂಡ 34:7

ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.

ಲೇವ್ಯಕಾಂಡ 2:1

ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.

ಲೇವ್ಯಕಾಂಡ 4:20

ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 4:26

ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 4:31

ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 5:10

ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 5:13

ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.

ಲೇವ್ಯಕಾಂಡ 5:15

ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.

ಲೇವ್ಯಕಾಂಡ 5:18

ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.

ಯೆಶಾಯ 1:18

ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.

ಯೆಹೆಜ್ಕೇಲ 18:21

ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.

ಯೆಹೆಜ್ಕೇಲ 18:26

ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು.

ಯೆಹೆಜ್ಕೇಲ 33:14

ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ

ಯೆಹೆಜ್ಕೇಲ 33:19

ಆದರೆ ದುಷ್ಟನು ದುಷ್ಟತ್ವವನ್ನು ಬಿಟ್ಟು ತಿರುಗಿಕೊಂಡು ನ್ಯಾಯ ವನ್ನೂ ನೀತಿಯನ್ನೂ ನಡೆಸಿದರೆ ಅವನು ಅದರಲ್ಲಿಯೇ ಬದುಕುವನು.

ಮೀಕ 7:18

ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.

ಮತ್ತಾಯ 12:31

ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

1 ಕೊರಿಂಥದವರಿಗೆ 6:9

ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು

1 ಯೋಹಾನ 1:7

ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.

1 ಯೋಹಾನ 1:9

ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.

1 ಯೋಹಾನ 2:1

ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.

Interlinear

Choose Theme