ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
Cross references
ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.
ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.
ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು.
ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ
ಆದರೆ ದುಷ್ಟನು ದುಷ್ಟತ್ವವನ್ನು ಬಿಟ್ಟು ತಿರುಗಿಕೊಂಡು ನ್ಯಾಯ ವನ್ನೂ ನೀತಿಯನ್ನೂ ನಡೆಸಿದರೆ ಅವನು ಅದರಲ್ಲಿಯೇ ಬದುಕುವನು.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.