ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.
Cross references
ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.
ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.
ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.
ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
ಕರ್ತನು ಮೋಶೆಯೊಡನೆ ಮಾತನಾಡಿ--
ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.
ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ