ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.
Cross references
ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.
ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.
ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು.
ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.
ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು.
ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.
ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು.
ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.
ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ?
ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ.
ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.