ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
Cross references
ಯಾವನಾದರೂ ಕರ್ತನು ನಿಷೇಧಿಸಿದ ಆಜ್ಞೆ ಗಳಲ್ಲಿ ಯಾವದನ್ನಾದರೂ ಮಾಡಿ ಪಾಪಮಾಡಿದರೆ ಅದು ಅವನಿಗೆ ತಿಳಿಯದಿದ್ದಾಗ್ಯೂ ಅವನು ಅಪರಾಧಿ ಯಾಗಿರುವನು, ಅವನು ತನ್ನ ಅಪರಾಧವನ್ನು ಹೊತ್ತು ಕೊಳ್ಳುವನು.
ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?
ಆಗ ಆರೋನನು ಮೋಶೆಗೆ--ಇಗೋ, ಈ ದಿನ ಅವರು ಅಪರಾಧದ ಬಲಿಯನ್ನೂ ಅದರ ದಹನಬಲಿಯನ್ನೂ ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದ್ದಾಗ್ಯೂ ಇಂಥವುಗಳು ನನಗೆ ಸಂಭವಿಸಿದವು. ಇಂದು ನಾನು ಆ ಪಾಪದ ಬಲಿಯನ್ನು ತಿಂದರೆ ಅದು ಕರ್ತನ ದೃಷ್ಟಿಯಲ್ಲಿ ಅಂಗೀಕಾರ ವಾಗುವದೋ ಅಂದನು.ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.
ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು.
ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು.
ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.
ನೀವು ನಿಮ್ಮ ದೇವರಿಗೆ ಸಮಾಧಾನದ ಬಲಿಗಳ ಯಜ್ಞವನ್ನು ಸಮರ್ಪಿಸುವದಾದರೆ ನೀವು ಅದನ್ನು ಸ್ವಇಚ್ಛೆಯಿಂದ ಅರ್ಪಿಸಬೇಕು.
ಆದರೆ ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ ಅದು ಅಸಹ್ಯವಾದದ್ದು; ಅದು ಅಂಗೀಕೃತವಾಗುವದಿಲ್ಲ.
ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯನ್ನು ತೆಗೆದುಕೊಂಡು ಅವಳ ಬೆತ್ತಲೆ ತನವನ್ನು ನೋಡಿದರೆ ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ; ಅವರು ತಮ್ಮ ಜನರ ದೃಷ್ಟಿಯಲ್ಲಿಯೇ ತೆಗೆದು ಹಾಕಲ್ಪಡಬೇಕು; ಅವರ ರಕ್ತವು ಅವರ ಮೇಲೆ ಇರುವದು. ಅವನು ತನ್ನ ಸಹೋದರಿಯ ಬೆತ್ತಲೆತನ ವನ್ನು ಕಾಣುವಂತೆ ಮಾಡಿದ್ದರಿಂದ ತನ್ನ ಅಪರಾಧ ವನ್ನು ತಾನೇ ಹೊತ್ತುಕೊಳ್ಳುವನು.
ಇದಲ್ಲದೆ ನೀನು ನಿನ್ನ ತಾಯಿಯ ಸಹೋದರಿಯ ಇಲ್ಲವೆ ತಂದೆಯ ಸಹೋದರಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು, ಕಾಣುವಂತೆ ಮಾಡಿದವನು ತನ್ನ ಹತ್ತಿರದ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡಿದ್ದಾನೆ; ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು.
ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ.
ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು.
ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.
ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.
ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.